ಲೋಕಸಭಾ ಕ್ಷೇತ್ರದ  ಸಂಚಾರ ಜನಜಾಗ್ರತಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಣ್ಣಾಸಾಬ ಜೊಲ್ಲೆ ಮನವಿ

ಚಿಕ್ಕೋಡಿ :ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹತ್ತರವಾಟ,ಜೈನಾಪುರ, ವಡ್ರಾಳ ಮುಗಳಿ, ಕರೋಶಿ, ಬಂಬಲವಾಡ ಬೆಳಕುಡ  ನಾಗರಮುನ್ನೋಳಿ ಕಬ್ಬುರ ಗ್ರಾಮಗಳಿಗೆ ಭೇಟಿ ನೀಡಿ, ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ
ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಲಾಯಿತು ಹಾಗೂ ಮುನ್ನೆಚ್ಚರಿಗೆ ಕ್ರಮಗಳ ಕುರಿತು ಜನರಿಗೆ ತಿಳಿ ಹೇಳುವಂತೆ ತಿಳಿಸಿದರು.
 ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಗ್ರಾಮದಲ್ಲಿ ಪಡಿತರ ವಿತರಣೆಯಲ್ಲಿ ಏನಾದರು ತೊಂದರೆ ಇದ್ದರೇ ನನ್ನ ಗಮನಕ್ಕೆ ತರಬೇಕು. ಜೊತೆಗೆ ಜನ್ ಧನ್ ಖಾತೆಗಳಿಗೆ ಹಣ ಜಮಾ ಆಗಿದಿಯೋ ,ಇಲ್ಲವೋ ಎಂಬ ಮಾಹಿತಿ ಪಡೆದು, ಕೊರೋನಾ ಹರಡಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು,
ನಿಮ್ಮ ಮನೆಗಳ ಸಮೀಪ ಗಾಡಿಗಳ ಮೂಲಕ ಪೂರೈಸುವ ವ್ಯವಸ್ಥೆ ಮಾಡಲಾಗಿದೆ‌. ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಆದಷ್ಟು ಮನೆಯಲ್ಲೇ ಇರಿ ಸುರಕ್ಷಿತವಾಗಿರಿ. ಎಲ್ಲಾ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸಹಕರಿಸಲು ವಿನಂತಿಸಿ, ಕೊರೋನಾ ವಿರುದ್ಧ ಹೋರಾಟದಲ್ಲಿ ಅವರುಗಳ ಶ್ರಮವನ್ನು ಶ್ಲಾಘಿಸಿದರು.ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು,ಕ್ವಾರಂಟೈನ್ ಇದ್ದವರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕಿರಾಣಿ ಸಾಮಾನು, ತರಕಾರಿಗಳನ್ನು ಹೆಚ್ಚಿನ ಬೆಲೆಗೆ ಮಾರುತ್ತಿದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಕಾರ್ಯಕರ್ತೆಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
 
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ತಹಶೀಲ್ದಾರ ಶ್ರೀ ಸುಭಾಷ ಸಂಪಗಾವಿ,  ಆರೋಗ್ಯಾಧಿಕಾರಿಗಳಾದ ಶ್ರಿ ವಿಠ್ಠಲ ಶಿಂಧೆ,  ಸಿಪಿಐ ಶ್ರೀ ಆರ್ ಆರ್ ಪಾಟೀಲ್, ಸಿಡಿಪಿಓ ಶ್ರೀಮತಿ ದೀಪಾ ಕಾಳೆ ಹಾಗೂ ಆಶಾ,ಅಂಗನವಾಡಿ ಕಾರ್ಯಕರ್ತರು ಹಾಗು ಗಣ್ಯರು ಉಪಸ್ಥಿತರಿದ್ದರು.
Share
WhatsApp
Follow by Email