ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶೀಘ್ರವೇ ರಾಯಣ್ಣ ಮೂರ್ತಿ ಸ್ಥಾಪಿಸಲಾಗುತ್ತೆ..ರಮೇಶ ಜಾರಕಿಹೊಳಿ

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶೀಘ್ರವೇ ರಾಯಣ್ಣ ಮೂರ್ತಿ ಸ್ಥಾಪಿಸಲಾಗುತ್ತೆ..ರಮೇಶ ಜಾರಕಿಹೊಳಿ

ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸಂಬಂಧ ಈಗಾಗಲೇ ಈಗಾಗಲೇ ಮುಖ್ಯಮಂತ್ರಿಗಳು, ಗೃಹ ಸಚಿವರು, ಕಾಗಿನೆಲೆ ಶ್ರೀಗಳು ಮಾತನಾಡಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜಕ್ಕೆ ಹಿತವಾಗುವ ದೃಷ್ಟಿಯಿಂದ ಒಳ್ಳೆಯ ನಿರ್ಣಯ ಕೈಗೊಳ್ಳುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವು ವಿಚಾರ ಇಡೀ ರಾಜ್ಯಾಧ್ಯಂತ ಸಾಕಷ್ಟು ವಿವಾದಕ್ಕೆ ಗ್ರಾಸವಾಗಿದೆ. ಅಷ್ಟೇ ಅಲ್ಲದೇ ಗುರುವಾರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್, ಕರ್ನಾಟಕ ರಣಧೀರ ಪಡೆ, ಹಾಲುಮತ ಸೇರಿ ಸಾವಿರಾರು ರಾಯಣ್ಣ ಅಭಿಮಾನಿಗಳು ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು.

ಈ ಸಂಬಂಧ ಬೆಳಗಾವಿ ಸರ್ಕಿಟ್ ಹೌಸ್‍ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು 11 ಗಂಟೆಗೆ ಹಾಲುಮತ ಸಮಾಜ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರಾಯಣ್ಣ ಅಭಿಮಾನಿಗಳ ಜೊತೆ ಸಭೆ ನಿಗದಿ ಪಡಿಸಲಾಗಿತ್ತು. ಆದ್ರೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಲು ತೆರಳಿದ್ದಾರೆ ಎಂದು ತಿಳಿಸಿದರು.

Share
WhatsApp
Follow by Email